ಶಿವಮೊಗ್ಗ: ಸಿಎಂ ಬಿ.ಎಸ್ ಯಡಿಯೂರಪ್ಪನವರು ತವರು ಜಿಲ್ಲೆ ಶಿವಮೊಗ್ಗ ಕ್ಷೇತ್ರಕ್ಕೆ 10 ಕೋಟಿ ಅನುದಾನ ನೀಡಿರುವುದಾಗಿ ಘೋಷಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾತ್ನಾಡಿದ ಅವರು 10 ಕೋಟಿ ಅನುದಾನದ ಬಗ್ಗೆ ಹೇಳಿದ್ದಾರೆ.
ಜಿಲ್ಲೆಯ ದಸರಾಗೆ 2 ಕೋಟಿ ಹಾಗೂ ಮಳೆಯಿಂದಾಗಿ ನಷ್ಟವಾಗಿರುವ ಕಾರಣಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಹವಾಮಾನ ವೈಪರಿತ್ಯದಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ರದ್ದು ಮಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಹಾವೇರಿಗೆ ಪ್ರಯಾಣ ಬೆಳೆಸಿದ್ದಾರೆ.