ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಬಿಎಸ್ವೈ

547

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿಯೂ ಸಹ ಸುದ್ದಿ ಮಾಡಲಾಗ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಎಸ್ವೈ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತ್ನಾಡಿದ ಅವರು, ರಾಜೀನಾಮೆ ಕೊಡು ಎಂದು ಹೈಕಮಾಂಡ್ ಹೇಳಿಲ್ಲ. ನಾನು ಪ್ರಧಾನಿ ಭೇಟಿಯಾಗಿರುವುದು ರಾಜ್ಯದ ರಾಜಕೀಯ ಬೆಳವಣಿಗೆ, ಅಭಿವೃದ್ಧಿ ಯೋಜನೆಗಳ ಸಂಬಂಧ. ರಾಜೀನಾಮೆ ನೀಡುತ್ತೇನೆ ಎನ್ನುವುದು ಶುದ್ಧ ಸುಳ್ಳು ಎನ್ನುವ ಮೂಲಕ ವಿರೋಧಿ ಬಣಕ್ಕೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಮೇಕೆದಾಟು ಯೋಜನೆ ಕರ್ನಾಟಕ ಹಾಗೂ ತಮಿಳುನಾಡು ಅಣ್ಣ ತಮ್ಮಂದಿರಂತೆ ಇರಲು ಒಂದು ಅವಕಾಶ. ಇದರಿಂದ ಪಕ್ಕದ ರಾಜ್ಯಗಳಿಗೆ ಯಾವುದೇ ತೊಂದರೆಯಿಲ್ಲ. ಹೀಗಾಗಿ ಯೋಜನೆಗೆ ಅವಕಾಶ ಮಾಡಿಕೊಡುವಂತೆ ಸಂಬಂಧಪಟ್ಟ ಸಚಿವರಲ್ಲಿ ಮನವಿ ಮಾಡುತ್ತೇನೆ.

ಶುಕ್ರವಾರ ಪ್ರಧಾನಿ ಮೋದಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನ ಭೇಟಿಯಾಗಿ ವಾಪಸ್ ಆಗುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!