ಸಿಎಂ ವಿಜಯಪುರ ವೈಮಾನಿಕ ಸಮೀಕ್ಷೆಗೆ ಮಳೆ ಅಡ್ಡಿ

274

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಉತ್ತರ ಕರ್ನಾಟ ಭಾಗದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಇಂದು ಕಲಬುರಗಿ, ಯಾದಗಿರಿ, ರಾಯಚೂರು ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು.

ಪ್ರವಾಹದಿಂದ ಹಾನಿಗೆ ಒಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ರು. ಈ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ್ರು. ಇದೀಗ ಸಿಎಂ ವಿಜಯಪುರ ಭಾಗದಲ್ಲಿ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆ ನಡೆಸಬೇಕಿದ್ದು, ಮಳೆ ಅಡ್ಡಿಯಾಗಿದೆ.

ಜಿಲ್ಲೆಯಲ್ಲಿ ಇಂದು ಸಹ ಮಳೆ ಮುಂದುವರೆದಿದೆ. ಮೋಡ ಕವಿದ ವಾತಾವರಣವಿದ್ದು ವೈಮಾನಿಕ ಸಮೀಕ್ಷೆಗೆ ಅಡ್ಡಿಯಾಗಿದೆ. ಅಲ್ದೇ, ಆಲಮಟ್ಟಿಯಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಭಾಗದ ಶಾಸಕರೊಂದಿಗೆ ಸಭೆ ನಿಗದಿಯಾಗಿದೆ. ಆದ್ರೆ, ಇಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಸಮೀಕ್ಷೆ ನಡೆಸ್ತಾರಾ ಅಥವ ರದ್ದಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ.

ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚೌಹ್ಹಾಣ ಹಾಗೂ ರಾಜ್ಯ ವಿಪತ್ತ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ ರಾಜನ್ ನಾಥ್ ಸೇರಿದಂತೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!