‘ಯಡಿಯೂರಪ್ಪರೇ ಸಿಎಂ, ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ’

220

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಬಿಜೆಪಿ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಹೀಗಾಗಿಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಕರ್ನಾಟಕಕ್ಕೆ ಬಂದಿದ್ದಾರೆ. ಇದರ ನಡುವೆ ದೋಸ್ತಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಈ ಬಗ್ಗೆ ಗುರುವಾರ ಮಾತ್ನಾಡಿದ್ದಾರೆ.

ಮುಂದಿನ ಎರಡು ವರ್ಷ ಯಡಿಯೂರಪ್ಪರೇ ಸಿಎಂ ಆಗಿ ಮುಂದುವರೆಯುತ್ತಾರೆ. ಅಲ್ದೇ, ಮುಂದಿನ ಚುನಾವಣೆ ಸಹ ಅವರ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದು ಹೇಳುವ ಹೇಳಿದ್ದಾರೆ. ನಾವು ಯಡಿಯೂರಪ್ಪ ಹಾಗೂ ಅಮಿತ ಶಾ ನಂಬಿಕೊಂಡು ಬಂದಿದ್ದೇವೆ. ಯಡಿಯೂರಪ್ಪ ಎಲ್ಲರನ್ನ ಕರೆದು ಮಾತ್ನಾಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.




Leave a Reply

Your email address will not be published. Required fields are marked *

error: Content is protected !!