ಸಿಎಂ ರಾಜ್ಯಪಾಲರ ಭೇಟಿ: ಸಚಿವರಲ್ಲಿ ಟೆನ್ಷನ್!

307

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ರಾಜ್ಯಪಾಲ ವಜುಬಾಯಿ ವಾಲಾ ಅವರನ್ನ ಭೇಟಿ ಮಾಡಿದ್ದಾರೆ. ಈ ಭೇಟಿ ರಾಜ್ಯ ರಾಜಕೀಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಆಗಸ್ಟ್ ನಲ್ಲಿ ಸಚಿವ ಸಂಪುಟ ಪುನಾರಚನೆ ಇರುವುದ್ರಿಂದ ತೀವ್ರ ಕುತೂಹಲ ಮೂಡಿಸಿದೆ.

ಈಗಿರುವ 4-5 ಸಚಿವರನ್ನ ಕೈಬಿಟ್ಟು ಹೊಸದಾಗಿ ಶಾಸಕರಿಗೆ ಸಚಿವ ಸ್ಥಾನ ನೀಡಲಿದ್ದು, ಇದಕ್ಕಾಗಿ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗ್ತಿದೆ. ಹೀಗಾಗಿ ಸಚಿವರ ಪಾಳೆಯದಲ್ಲಿ ಒಂದಿಷ್ಟು ಟೆನ್ಷನ್ ಶುರುವಾಗಿದೆ. ಆದ್ರೆ, ಸಿಎಂ ಜೊತೆ ಗೃಹ ಸಚಿವರು ಹೇಳೋದು ಬೇರೆ.

ಈ ವೇಳೆ ಮಾತ್ನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಸಂಪುಟ ಪುನಾರಚನೆ ಬಗ್ಗೆ ಮಾತ್ನಾಡಿಲ್ಲ. ಸ್ವಾತಂತ್ರ್ಯ ದಿನಾಚರಣೆ ಕುರಿತು ಚರ್ಚಿಸಲಾಗಿದೆ. ಕೋವಿಡ್ ನಿಯಂತ್ರಣ, ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟದ ಜಾಲದ ವಿರುದ್ಧ ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಆದ್ರೂ, ಈ ಭೇಟಿ ಬಿಜೆಪಿ ನಾಯಕರಲ್ಲಿ ಒಂದಿಷ್ಟು ಊಹಾಪೋಹಕ್ಕೆ ಕಾರಣವಾಗಿದೆ.




Leave a Reply

Your email address will not be published. Required fields are marked *

error: Content is protected !!