ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಶಾಸಕರ ಜೊತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ಹಾಗೂ ಮಂಗಳವಾರ ಶಾಸಕರ ಜೊತೆ ಚರ್ಚೆ ನಡೆಸಲಿದ್ದಾರೆ.
ಶಾಸಕರ ಕ್ಷೇತ್ರಗಳ ಅಭಿವೃದ್ಧಿ, ಅನುದಾನ, ಯಾವ ಯಾವ ಇಲಾಖೆಯಿಂದ ಏನೆಲ್ಲ ಕೆಲಸಗಳು ಆಗಬೇಕಿದೆ ಅನ್ನೋದರ ಕುರಿತು ಚರ್ಚೆ ನಡೆಸಲಿದ್ದಾರೆ. ಇದರ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಹ ಶಾಸಕರ ಅಭಿಪ್ರಾಯ ತೆಗೆದುಕೊಳ್ಳಲಿದ್ದಾರೆ ಎನ್ನಲಾಗ್ತಿದೆ.