ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಕೆಲ ದಿನಗಳಿಂದ ಪ್ರಧಾನಿ ಮೋದಿ ಭೇಟಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಯುತ್ತಿದ್ದರು. ಇದೀಗ ಅವರು ಭೇಟಿಯಾಗ್ತಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಕಾಲೆಳೆದಿದ್ದಾರೆ.
ಕಾಡಿಬೇಡಿ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಬಳಸಿಕೊಳ್ಳದೆ. ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ ಎಂದು ಬರೆದು, ಜಸ್ಟಿಸ್ ಫಾರ್ ಕರ್ನಾಟಕ ಎಂದಿದ್ದಾರೆ.
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಅಥವ ಕೆಲ ಸಚಿವರನ್ನ ಕೈಬಿಟ್ಟು ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಬೇಕಾ? ನೀಡುವುದಾದರೆ ಯಾರಿಗೆ ನೀಡಬೇಕು ಏನು ಅನ್ನೋದರ ಚರ್ಚೆಯನ್ನ ಬಿಎಸ್ವೈ ನಡೆಸಲಿದ್ದಾರೆ ಎನ್ನಲಾಗ್ತಿದೆ.