ಸಿಎಂ ಸುದ್ದಿಗೋಷ್ಠಿ: ‘ಕೈ’ ನಾಯಕರ ಆರೋಪಕ್ಕೆ ಉತ್ತರ ಕೊಡ್ತಾರಾ?

304

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ವಿಚಾರದಲ್ಲಿ ರಾಜ್ಯ ಸರ್ಕಾರ ಭಷ್ಟಾಚಾರ ನಡೆಸಿದೆ. ಸಾವಿರಾರು ಕೋಟಿ ರೂಪಾಯಿ ಗುಳಂ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಮೇಲಿಂದ ಮೇಲೆ ಆರೋಪ ಮಾಡ್ತಿದ್ದಾರೆ. ಈ ಆರೋಪಕ್ಕೆ ಉತ್ತರ ಕೊಡಲು ಸಿಎಂ ಬಿ.ಎಸ್ ಯಡಿಯೂರಪ್ಪ ಸಿದ್ಧರಾಗಿದ್ದಾರೆ ಎಂದು ಹೇಳಲಾಗ್ತಿದೆ.

ಮಧ್ಯಾಹ್ನ 3 ಗಂಟೆಗೆ ಪಂಚ ಸಚಿವರೊಂದಿಗೆ ಸಿಎಂ ಸುದ್ದಿಗೋಷ್ಠಿ ನಡೆಸ್ತಿದ್ದು, ಸಚಿವರಿಂದಲೇ ಕಾಂಗ್ರೆಸ್ ಆರೋಪಕ್ಕೆ ಉತ್ತರ ಕೊಡಿಸುವ ಕೆಲಸ ಮಾಡ್ತಾರೆ ಎನ್ನಲಾಗ್ತಿದೆ. ಸಿಎಂ ಒಬ್ಬರೆ ಬದಲಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ, ಡಿಸಿಎಂ ಅಶ್ವಥನಾರಾಯಣ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ ಅವರೊಂದಿಗೆ ಪ್ರೆಸ್ ಮೀಟ್ ನಡೆಸ್ತಿದ್ದಾರಂತೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ ಸೇರಿದಂತೆ ಕಾಂಗ್ರೆಸ್ ನಾಯಕರ ಆರೋಪಕ್ಕೆ ಉತ್ತರಿಸುವ ಕೆಲಸವಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ.


TAG


Leave a Reply

Your email address will not be published. Required fields are marked *

error: Content is protected !!