ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ವಿವಿಧ ಕಾರ್ಯಕ್ರಮಗಳ ನಿಮಿತ್ತ ದಾವೋಸ್ ತೆರಳಿ ಇಂದು ವಾಪಸ್ ಆಗಿದ್ದಾರೆ. ಮುಖ್ಯಮಂತ್ರಿ ಬರ್ತಿದ್ದಂತೆ ಸಂಪುಟ ವಿಸ್ತರಣೆಯ ಸರ್ಕಸ್ ಜೋರಾಗಿ ನಡೆದಿದೆ. ಇಷ್ಟು ದಿನ ಇವತ್ತು ನಾಳೆ ಅನ್ನೋ ಮಾತು ಕೇಳಿ ಕೇಳಿ ಸಾಕಾಗಿ ಹೋದ ಶಾಸಕರು ಮಂತ್ರಿಗಿರಿ ಬಗ್ಗೆ ಬಿಸಿಬಿಸಿ ಚರ್ಚೆ ನಡೆಸಿದ್ದಾರೆ.
ಬೈ ಎಲೆಕ್ಷನ್ ನಲ್ಲಿ ಗೆದ್ದ ಬಂದ 24 ಗಂಟೆಯಲ್ಲಿ ನೂತನ ಶಾಸಕರಿಗೆ ಸಚಿವರನ್ನಾಗಿ ಮಾಡ್ತೀನಿ ಅಂತಾ ಹೇಳಿದ್ರು. ಆದ್ರೆ, ಚುನಾವಣೆ ಮುಗಿದು ಒಂದು ತಿಂಗಳ ಮೇಲಾಗಿದೆ. ಇದುವರೆಗೂ ಸಚಿವ ಸಂಪುಟ ವಿಸ್ತರಣೆ ಆಗಿಲ್ಲ. ಇದೀಗ ಮತ್ತೆ ಸಚಿವ ಸಂಪುಟದ ಚರ್ಚೆ ಜೋರಾಗಿದ್ದು ದೋಸ್ತಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಸಹಾಯ ಮಾಡಿದ ನಾಯಕರಿಗೆ ಮಂತ್ರಿ ಸ್ಥಾನ ಸಿಗುತ್ತಾ? ಇನ್ನು ದಿನಗಳು ಮುಂದಕ್ಕೆ ಹೋಗುತ್ತಾ ಬರುತ್ತಾ ಅನ್ನೋ ಪ್ರಶ್ನೆ ಮೂಡಿದೆ.