‘ಸಿಎಂ ಕುರ್ಚಿ ಖಾಲಿಯಿಲ್ಲ ಬೋರ್ಡ್ ಹಾಕಿಕೊಂಡು ತಿರುಗಾಡಬೇಕಾಗಿದೆ’

255

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಬಂದು ಹೋದರೂ ಸಿಎಂ ಬದಲಾವಣೆಯ ಚರ್ಚೆ ಮಾತ್ರ ನಿಂತಿಲ್ಲ. ಹೀಗಾಗಿ ಇಂದಿಗೂ ನಾಯಕತ್ವದ ಬದಲಾವಣೆಯ ಮಾತುಗಳು ಕೇಳಿ ಬರ್ತಿವೆ. ಈ ಬಗ್ಗೆ ಮಾತ್ನಾಡಿದ ಸಚಿವ ಜಗದೀಶ ಶೆಟ್ಟರ್, ರಾಜ್ಯದಲ್ಲಿ ಸಧ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಅನಗತ್ಯ ಚರ್ಚೆ ಬೇಡ. ಆದ್ರೆ, ಸಿಎಂ ಕುರ್ಚಿ ಖಾಲಿಯಿಲ್ಲ ಅನ್ನೋ ಬೋರ್ಡ್ ಹಾಕಿಕೊಂಡು ತಿರುಗಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ಶಾಸಕ ಅರವಿಂದ ಬೆಲ್ಲದ ಫೋನ್ ಕದ್ದಾಲಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ರಾಜ್ಯಮಟ್ಟದಲ್ಲಿ ಚರ್ಚೆಯಾಗಿದೆ. ಇದರ ಬಗ್ಗೆ ನಾನು ಮಾತ್ನಾಡುವುದಿಲ್ಲ. ಯಾರ ಹಣೆಯಲ್ಲಿ ಏನು ಬರೆದಿದೆಯೋ ಅದೆ ಆಗುವುದು ಎಂದು ಹೇಳಿದರು.




Leave a Reply

Your email address will not be published. Required fields are marked *

error: Content is protected !!