ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯಾಗುತ್ತದೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಏನು ಹೇಳುತ್ತೀರಿ ಅನ್ನೋ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಇದೊಂದು ಶುದ್ಧ ಸುಳ್ಳು. ಯಾವುದೇ ಬದಲಾವಣೆ ಇಲ್ಲ ಎಂದರು.
ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಡುವಿನ ಆಂತರಿಕ ಪೈಪೋಟಿಯಿಂದಾಗಿ ಅಲ್ಲಿನವರು ಕಾಂಗ್ರೆಸ್ ಬಿಡುತ್ತಾರೆಯೇ ಹೊರ್ತು ಯಾರು ಬಿಜೆಪಿ ಬಿಡುವುದಿಲ್ಲ. ಜಾರಕಿಹೊಳಿ ಸಂಪರ್ಕದಲ್ಲಿ ಯಾರಿದ್ದಾರೆ ಅನ್ನೋದು ತಿಳಿದುಕೊಳ್ಳುತ್ತೇನೆ ಎಂದರು.