ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಹಲವು ದಿನಗಳು ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹೇಳಿಕೆ ಸದ್ದು ಮಾಡುತ್ತಿದೆ. ಸುರೇಶ್ ಗೌಡರ ಹೇಳಿಕೆಯನ್ನು ಕಾಂಗ್ರೆಸ್ ಭರ್ಜರಿಯಾಗಿ ಉಪಯೋಗಿಸಿಕೊಳ್ಳುತ್ತಿದೆ. ಈ ಬಗ್ಗೆ ಮತ್ತೆ ಮತ್ತೆ ಬಿಜೆಪಿಯ ಕಾಲೆಳೆಯುತ್ತಿದೆ.
ಕಾರ್ಯಕರ್ತರ ಸರಣಿ ಹತ್ಯೆಯ ಹಿನ್ನೆಲೆಯಲ್ಲಿ ಜನೋತ್ಸವವನ್ನು ಬಿಜೆಪಿ ಮುಂದೂಡಿತ್ತು. ಈಗ ಮತ್ತೆ ನಡೆಸುವ ಬಗ್ಗೆ ದಿನಾಂಕ ನಿಗದಿ ಮಾಡಿದೆ ಎನ್ನುವಷ್ಟರಲ್ಲಿ ಮತ್ತೆ ಮುಂದೂಡಿದೆಯಂತೆ. ಈ ಬಗ್ಗೆ ಕಾಂಗ್ರೆಸ್ ಟ್ವೀಟರ್ ನಲ್ಲಿ ಕಾಲೆಳೆಯುತ್ತಿದೆ. ಸುರೇಶ್ ಗೌಡರ ಸಿಎಂ ಬದಲಾವಣೆ ಹೇಳಿಕೆಗೂ, ಮುಂದಿನ ಸಿಎಂ ನಿರಾಣಿ ಅನ್ನೋ ಪೋಸ್ಟರ್ ಗೂ ಹಾಗೂ ಜನೋತ್ಸವ ಮುಂದೂಡಿಕೆಗೂ ಸಂಬಂಧವಿದೆಯೇ ಎಂದು ಪ್ರಶ್ನಿಸಿದೆ.
ಬಿಜೆಪಿ ಭ್ರಷ್ಟೋತಸವ ಮಾಡುತ್ತಿರುವ ಸಿಎಂ ಬೊಮ್ಮಾಯಿ ಅವರಿಗೆ ಜನೋತ್ಸವ ಮಾಡುವ ಶಕ್ತಿಯೂ ಇರಲಿಲ್ಲ. ಈಗ ಯೋಗವೂ ಇಲ್ಲ ಎಂದೆನಿಸುತ್ತದೆ ಎಂದು ವ್ಯಂಗ್ಯವಾಡಲಾಗಿದೆ.