8 ನಾಯಕರಿಗೆ ಮಾತ್ರ ಸಚಿವ ಸ್ಥಾನ

236

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ಎಷ್ಟು ಜನ ಶಾಸಕರಿಗೆ ಮಂತ್ರಿಗಿರಿ ಭಾಗ್ಯ ಸಿಗುತ್ತೆ ಅನ್ನೋ ಕುತೂಹಲವಿತ್ತು. ಅದಕ್ಕೆ ತೆರೆ ಬಿದ್ದಿದೆ.

ಸಿದ್ದು-ಡಿಕೆಶಿ ಸಚಿವ ಸಂಪುಟದಲ್ಲಿ ಮೊದಲ ಹಂತದಲ್ಲಿ ಕೇವಲ 8 ನಾಯಕರಿಗೆ ಸಚಿವ ಸ್ಥಾನ ಸಿಕ್ಕಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಕಳಿಸಿರುವ ಪತ್ರದಲ್ಲಿ ಡಾ.ಜಿ ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಎಂ.ಬಿ ಪಾಟೀಲ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಜಮೀರ್ ಅಹ್ಮದ್ ಖಾನ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!