Search

‘ಪಕ್ಷ ತಾಯಿಯಿದ್ದಂತೆ ಮಕ್ಕಳಿಗೆ ಏನು ಕೊಡಬೇಕು ಗೊತ್ತಿದೆ’

125

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ವಿಚಾರ ಸಂಬಂಧ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಮುಂಜಾನೆ 9.50ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದರು. ಇದಕ್ಕೂ ಮೊದಲು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ನನಗೆ ಪಕ್ಷ ನನಗೆ ದೇವರು, ದೇವಾಲಯ. ತಾಯಿ ಇದ್ದಂತೆ. ದೇವರು ಹಾಗೂ ತಾಯಿಗೆ ಮಕ್ಕಳಿಗೆ ಏನು ಕೊಡಬೇಕು ಅನ್ನೋದು ಗೊತ್ತಿದೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಯವರು ಒಬ್ಬನೆ ಬರಲು ಹೇಳಿದ್ದಾರೆ. ಹೀಗಾಗಿ ನಾನೊಬ್ಬನೆ ಹೊರಟಿದ್ದೇನೆ. ಕಾಂಗ್ರೆಸ್ ಪಕ್ಷ ನನಗೆ ದೇವಸ್ಥಾನ. ನನ್ನ ಕೆಲಸ ಮಾಡಿದ್ದೇನೆ. ಈಗ ನನ್ನ ಆರೋಗ್ಯ ಚೆನ್ನಾಗಿದೆ. ಜನರು ನಂಬಿಕೆ ಇಟ್ಟು ನಮಗೆ ಅಧಿಕಾರ ಕೊಟ್ಟಿದ್ದಾರೆ. ಈಗ ಜನರ ನಂಬಿಕೆ ಉಳಿಸಲು ಶ್ರಮ ಪಡಬೇಕು ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!