ಗುರುಲಿಂಗಸ್ವಾಮಿ ಹೊಳಿಮಠ ಅಂತಿಮ ದರ್ಶನ ಪಡೆದ ಸಿಎಂ

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು, ಅಕಾಲಿಕ ನಿಧನ ಹೊಂದಿದ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತರಾದ ಗುರುಲಿಂಗಸ್ವಾಮಿ ಹೊಳಿಮಠ ಅವರ ಅಂತಿಮ ದರ್ಶನವನ್ನು ಸಿಎಂ ಬೊಮ್ಮಾಯಿ ಪಡೆದರು.

ಹೊಳಿಮಠ ಅವರ ನಿವಾಸದಲ್ಲಿ ಇರಿಸಲಾಗಿದ್ದ ಪಾರ್ಥಿಕ ಶರೀರಕ್ಕೆ ನಮಸ್ಕರಿಸಿ ಭಾವಪೂರ್ಣ ವಿದಾಯ ಹೇಳಿದರು. ಈ ವೇಳೆ ಸಚಿವರಾದ ಮುರುಗೇಶ್ ನಿರಾಣಿ, ಮುನಿರತ್ನ, ಗೋಪಾಲಯ್ಯ ಸೇರಿದಂತೆ ಇತರರಿದ್ದರು.

ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು ಹೊಳಿಮಠ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇನ್ನು ಗುರುಲಿಂಗಸ್ವಾಮಿ ಹೊಳಿಮಠ ಅವರ ಅಂತ್ಯಕ್ರಿಯೆ ರಾಮದುರ್ಗದ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!