ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ವಿಚಾರ ಸಂಬಂಧ ಗೃಹಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ, ಹಿರಿಯ ಅಧಿಕಾರಿಗಳು, 8 ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒಗಳ ಸಭೆಯನ್ನು ವಿಡಿಯೋ ಮೂಲಕ ನಡೆಸಿದರು.
ಕಲುಷಿತ ನೀರು ಕುಡಿದು ಕೊಪ್ಪಳದಲ್ಲಿ ಮೃತಪಟ್ಟಿರುವ ಪ್ರಕರಣ ಸಂಬಂಧ ಜಿಲ್ಲಾ ಪಂಚಾಯ್ತಿ ಸಿಇಒ ಅವರನ್ನು ತರಾಟೆಗೆ ತೆಗೆದುಕೊಂಡರು. ನಿವೇನು ಜನರನ್ನು ಸಾಯಿಸಲು ಇರೋದಾ? ಈ ಪ್ರಕರಣ ಕುರಿತು ವಿಶೇಷ ತನಿಖಾ ತಂಡ ರಚಿಸಿ ಎಂದು ಆದೇಶಿಸಿದರು.
ಇನ್ನು ಮುಂದೆ ಇಂತಹ ಪ್ರಕರಣಗಳು ನಡೆದರೆ ಜಿಲ್ಲಾ ಪಂಚಾಯ್ತಿ ಸಿಇಒಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗಬಾರದು ಅಂತಾ ಸೂಚನೆ ನೀಡಿದರು.