ಕೆಎಂಎಫ್ ಜೊತೆ ಸಿಎಂ ಸಭೆ: ಹಾಲಿನ ದರ ಹೆಚ್ಚಳ ಸಾಧ್ಯತೆ

95

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೆಎಂಎಫ್ ಅಧಿಕಾರಿಗಳ ಜೊತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ ಹಾಲು ಒಕ್ಕೂಟದ ಪದಾಧಿಕಾರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಭೇಟಿ ಮಾಡಲಿದ್ದಾರೆ.

ಈ ವೇಳೆ ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಹಾಗೂ ಗ್ರಾಹಕರಿಗೆ ಮಾರುವ ಹಾಲಿನ ದರ ಹೆಚ್ಚಳದ ಕುರಿತು ಚರ್ಚೆ ನಡೆಯಲಿದೆ. ಗ್ರಾಹಕರಿಗೆ ಹೊರಯಾಗದಂತೆ ಹೆಚ್ಚಿಸುವುದು ಹಾಗೂ ಉತ್ಪಾದಕರಿಗೆ ಲಭಾದಾಯಕ ಆಗುವಂತೆ ಪ್ರತಿ ಲೀಟರ್ ಮೇಲೆ 5 ರೂಪಾಯಿ ಹೆಚ್ಚಳ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈಗಾಗ್ಲೇ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಹೀಗಾಗಿ ಹಾಲಿನ ದರ ಹೆಚ್ಚಳ ಸಂಬಂಧ ವಿವಿಧ ಹಾಲು ಒಕ್ಕೂಟಗಳು ದರ ಹೆಚ್ಚಳ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದೆ. ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟುವುದು ಮಾತ್ರ ಸತ್ಯ.




Leave a Reply

Your email address will not be published. Required fields are marked *

error: Content is protected !!