ಇಂದು ದೆಹಲಿಗೆ ಡಿಕೆಶಿ.. ಸಂಜೆಯೊಳಗೆ ಸಿಎಂ ಹೆಸರು ಫೈನಲ್?

187

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಈಗ ಇರುವ ದೊಡ್ಡ ಸಮಸ್ಯೆ ಎಂದರೆ ಮುಖ್ಯಮಂತ್ರಿ ಯಾರು ಅನ್ನೋದು. ಚುನಾವಣೆ ಪೂರ್ವದಿಂದಲೂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹೆಸರು ಸದಾ ಚರ್ಚೆಯಲ್ಲಿತ್ತು. ಇದನ್ನು ಸ್ವತಃ ಸಿದ್ದರಾಮಯ್ಯ ಹೇಳಿದ್ದರು.

ಈಗ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಆದರೆ, ಡಿ.ಕೆ ಶಿವಕುಮಾರ್ ಸಂಪ್ರದಾಯದಂತೆ ಕೆಪಿಸಿಸಿ ಅಧ್ಯಕ್ಷರಾದವರು ಮುಂದಿನ ಸಿಎಲ್ ಪಿ ನಾಯಕರು. ಜೊತೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಮಾತು ಕೊಟ್ಟಂತೆ ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಂಡು ಬಂದಿದ್ದೇನೆ. ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಿರೋದು ಡಿಕೆಶಿ. ಹೀಗಾಗಿ ಇಂದು ದೆಹಲಿಗೆ ಹೋಗಿ ಹಿರಿಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ.

ಸೋಮವಾರ ಸಂಜೆ ಸಿದ್ದರಾಮಯ್ಯ ದೆಹಲಿಗೆ ಹೋಗಿ ಚರ್ಚೆ ನಡೆಸಿದ್ದಾರೆ. 50:50 ಸಂಧಾನಸೂತ್ರಕ್ಕೆ ಸಿದ್ದರಾಮಯ್ಯ ಒಪ್ಪುತ್ತಿಲ್ಲ. ಪೂರ್ತಿ ಐದು ವರ್ಷ ಸಿಎಂ ಆಗ್ತೀನಿ ಅಂತಿದ್ದಾರೆ. ಡಿಕೆಶಿ ಸಹ ಇತರೆ ರಾಜ್ಯಗಳಲ್ಲಿ ಈ ಸೂತ್ರ ನಂಬಿದ ನಾಯಕರಿಗೆ ಕೊನೆಯಲ್ಲಿ ಎಲ್ಲ ಶಾಸಕರು ನನ್ನೊಂದಿಗೆ ಇದ್ದಾರೆ ಅನ್ನೋ ಕಾರಣಕ್ಕೆ ಸಿಎಂ ಸ್ಥಾನ ಬಿಟ್ಟು ಕೊಟ್ಟಿಲ್ಲ. ಅದೆ ರೀತಿ ಸಿದ್ದರಾಮಯ್ಯನವರು ನನಗೆ ಅಧಿಕಾರ ಬಿಟ್ಟು ಕೊಡಲಿಲ್ಲ ಅಂದರೆ ಹೇಗೆ ಅಂತಿದ್ದಾರೆ.

ಇಂದು ಸಂಜೆಯೊಳಗೆ ಮುಖ್ಯಮಂತ್ರಿ ಯಾರಾಗುತ್ತಾರೆ ಅನ್ನೋದು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ, ಡಿಕೆಶಿ ಯಾರೇ ಆದರೂ ಒಳಗೊಳಗೆ ಬಣರಾಜಕೀಯ ಕುದಿಯುವುದು ಪಕ್ಕಾ. ಮುಂದೆ ಅದು ಯಾವಾಗ ಸ್ಫೋಟವಾಗುತ್ತೆ ಅನ್ನೋದು ಮಾತ್ರ ಗೊತ್ತಿಲ್ಲ.




Leave a Reply

Your email address will not be published. Required fields are marked *

error: Content is protected !!