ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಯೂರಪ್ಪ ನೇತೃತ್ವದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ರು.
ಅರಣ್ಯ ರಕ್ಷಕರ ಮತ್ತು ಅರಣ್ಯ ವೀಕ್ಷಕರ ವೇತನ ಮತ್ತು ಭತ್ಯೆಗಳನ್ನ ಪರಿಷ್ಕರಣೆಗಾಗಿ ಸಿಎಂ ಮತ್ತು ಸಚಿವರಿಗೆ ಕೇಂದ್ರ ಸಂಘದಿಂದ ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮನವಿ ಪ್ರಸ್ತಾವನೆಯನ್ನ ಆರ್ಥಿಕ ಇಲಾಖೆಗೆ ಸಲ್ಲಿಸಲು ಸೂಚಿಸಿದ್ರು. ಮುಂದಿನ ವಾರದಲ್ಲಿ ನಡೆಯಲಿರುವ ವೇತನ ಸಮಿತಿ ಸಭೆಯಲ್ಲಿ ಚರ್ಚಿಸಿ ಆರ್ಥಿಕ ಇಲಾಖೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಅರಣ್ಯ ರಕ್ಷಕರ ಮತ್ತು ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷರಾದ ವಿಠ್ಠಲ ಜೊನಿ, ಪ್ರಧಾನ ಕಾರ್ಯದರ್ಶಿ ರಾಜು ಲಿಂಬು ಚವ್ಹಾಣ ಹಾಗೂ ಶಿವಮೊಗ್ಗ ವಿಭಾಗದ ಅಧ್ಯಕ್ಷರಾದ ಶ್ರೀನಿವಾಸ ಉಪಸ್ಥಿತರಿದ್ದರು.