ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಬಿಜೆಪಿಯ ನಾಯಕರು ಅಸಮಾಧನ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರವಿಂದ ಲಿಂಬಾವಳಿ, ವಿ.ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ, ಆರ್.ಅಶೋಕ್ ವಿಪಕ್ಷ ನಾಯಕರಾಗಿ ನೇಮಕವಾಗಿರುವುದಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದರು.
ಸಧ್ಯ ಹೊತ್ತಿಕೊಂಡಿರುವ ಬೆಂಕಿ ಜ್ವಾಲೆಯಾಗುತ್ತದೆಯೋ ಗೊತ್ತಿಲ್ಲ. ಅವರ ಬುಡಕ್ಕೆ ಹತ್ತಿಕೊಳ್ಳುತ್ತೋ ಗೊತ್ತಿಲ್ಲ. ಕಾಂಗ್ರೆಸ್ ಸೇರ್ಪಡೆಯಾಗುವವರು ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬರಬೇಕು. ನಾನು ಯಾರನ್ನು ಬನ್ನಿ ಎಂದಿಲ್ಲ. ಬಹಳ ವರ್ಷ ಬಿಜೆಪಿ ಸಿದ್ಧಾಂತ ಒಪ್ಪಿಕೊಂಡಿರುತ್ತಾರೆ. ಅದನ್ನು ಬಿಟ್ಟು ಬರಬೇಕು. ಅವರಾಗಿಯೇ ಬಂದರೆ ಸ್ವಾಗತಿಸುತ್ತೇವೆ ಅಂತಾ ಹೇಳಿದರು.