ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಕ್ಕಿ ವಿತರಣೆ ಸಂಬಂಧ ಭಾರತೀಯ ಆಹಾರ ನಿಗಮದೊಂದಿಗೆ ನಡೆದ ಮಾತುಕತೆ ವಿಚಾರ ಸಂಬಂಧ, ಕಮಿಟ್ ಮೆಂಟ್ ಪತ್ರ ತೋರಿಸಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದರು. ಇದಕ್ಕೆ ಉತ್ತರ ಎಂಬಂತೆ ಸಿಎಂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಎಫ್ ಸಿಐ ಕಮಿಟ್ ಮೆಂಟ್ ಪತ್ರ ಪೋಸ್ಟ್ ಮಾಡಿದ್ದಾರೆ.
ಟ್ವೀಟರ್ ನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಅಂತಾ ಸಿ.ಟಿ ರವಿ ವಿರುದ್ಧ ಕಿಡಿ ಕಾರಿದ್ದಾರೆ.