ಪ್ರಜಾಸ್ತ್ರ ಸುದ್ದಿ
ಮಂಗಳೂರು: ದೇಶದಲ್ಲಿ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ ಎನ್ನುವ ಹೇಳಿಕೆ ವಿಚಾರದ ವಿರುದ್ಧ ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಕಿಡಿ ಕಾರಿದ್ದಾರೆ.
ಓಲೈಕೆ ರಾಜಕಾರಣಕ್ಕಾಗಿ ನೀಡಿರುವ ಈ ಹೇಳಿಕೆ ಅಪಾಯಕಾರಿ. ದೇಶ ವಿಭಜನೆಗೆ ಇಂತಹ ಮಾನಸಿಕತೆಯೇ ಕಾರಣವೆನ್ನುವುದು ಕಾಂಗ್ರೆಸ್ ಮರೆಯಬಾರದು. ಇದನ್ನು ನೋಡಿದರೆ ಕಾಂಗ್ರೆಸ್ ನಿಜವಾದ ಕೋಮುವಾದಿ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ಐಎಸ್ಐ ಏಜೆಂಟ್ ಗಳು ಭಾಗವಹಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಯತ್ನಾಳ ಅವರು ಸುಮ್ಮನೆ ಆರೋಪ ಮಾಡುವುದಿಲ್ಲ. ಸಿಬಿಐ, ಎನ್ಐಎ ಈ ಕುರಿತು ವಿಶೇಷ ಗಮನ ಹರಿಸಬೇಕು ಅಂತಾ ಆಗ್ರಹಿಸಿದರು.