Search

ಸಿಎಂಗೆ ಸೋಲಿನ ಭಯ: ಆರ್.ಅಶೋಕ್

100

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆಯಿಂದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಸೋಮವಾರ ಸಮಾವೇಶದಲ್ಲಿ ಮಾತನಾಡಿದ ಅವರು, ತಾವು ಸಿಎಂ ಆಗಿ ಮುಂದುವರೆಯಬೇಕಾದರೆ ತಾವು 60 ಸಾವಿರ ಲೀಡ್ ಕೊಡಬೇಕು ಎಂದಿರುವುದಕ್ಕೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,  2018ರಲ್ಲಿ ಸೋಲಿನ ಭಯದಿಂದ ತಮ್ಮ ಸ್ವಕ್ಷೇತ್ರ ವರುಣಾದಿಂದ ಬದಾಮಿಗೆ ಪಲಾಯಾನ ಮಾಡಿದ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ ಎಂದಿದ್ದಾರೆ.

ನಿಮ್ಮ ಗ್ಯಾರೆಂಟಿಗಳು ಜನರನ್ನು ತಲುಪಿದೆ ಎನ್ನುವ ವಿಶ್ವಾಸವಿಲ್ಲವೇ?, ಮೈಸೂರಿನಲ್ಲಿ ಹೀನಾಯವಾಗಿ ಸೋಲಿಸಿ ನಿಮ್ಮನ್ನು ಕುರ್ಚಿಯಿಂದ ಇಳಿಸಬೇಕು ಎನ್ನುವ ಹುನ್ನಾರದಿಂದ ಸ್ವಪಕ್ಷದವರೇ ಒಳೇಟು ನೀಡುವ ಭಯ ಕಾಡುತ್ತಿದೆಯೇ?, ವರುಣಾದಲ್ಲಿ 60 ಸಾವಿರ ಲೀಡ್ ಬರದಿದ್ದರೆ ಕುರ್ಚಿಯಿಂದ ಇಳಿಯಬೇಕೆಂದು ಹೈಕಮಾಂಡ್ ಈಗಾಗ್ಲೇ ಫರ್ಮಾನು ಹೊರಡಿಸಿದೆಯೇ? ಕರ್ನಾಟಕದ ಜನತೆ ನಿಮ್ಮ ಉತ್ತರಕ್ಕಾಗಿ ಕಾಯುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!