ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಹಿನ್ನೆಲೆಯಲ್ಲಿ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆಯಿಂದ ಹೈಸ್ಕೂಲ್ ಪ್ರಾರಂಭವಾಗುತ್ತಿದ್ದು, ಕಾಲೇಜುಗಳ ರಜೆ ಮುಂದುವರೆದಿದೆ. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಹೈಸ್ಕೂಲ್ ಪರಿಸ್ಥಿತಿ ನೋಡಿಕೊಂಡು ಕಾಲೇಜು ಶುರುವಿನ ಬಗ್ಗೆ ನಿರ್ಧರಿಸುತ್ತೇವೆ ಎಂದರು.
ಮೊದಲಿನಂತೆ ಶಾಂತಿಯುತವಾಗಿ ಶಾಲಾ, ಕಾಲೇಜುಗಳು ನಡೆಯುವುದು ನಮ್ಮ ಉದ್ದೇಶ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಚೋದನೆ ನೀಡುವ ಹೇಳಿಕೆ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಪೋಸ್ಟ್ ಬಗ್ಗೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು.