ಬೆಂಗಳೂರು: ಇಂದು ಬೆಳಗ್ಗೆ ರಾಜಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನ ಸಿಎಂ ಬಿ.ಎಸ್ ಯಡಿಯೂರಪ್ಪನವರು ಭೇಟಿಯಾಗಿ, ಮಾತುಕತೆ ನಡೆಸಿದ್ರು.
ಹಲವು ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ಅವರು ಮೈಸೂರಿನಿಂದ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅಂದು ರಾಷ್ಟ್ರಪತಿಯನ್ನ ಸಿಎಂ ಅವರನ್ನ ಸ್ವಾಗತಿಸಲಾಗಿರ್ಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ರು.
ರಾಷ್ಟ್ರಪತಿ ಭೇಟಿ ಸಮಯದಲ್ಲಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಸಿ.ಎನ್ ಯಶ್ವಥನಾರಾಯಣ ಹಾಗೂ ಟಿ.ಎಂ ವಿಜಯಭಾಸ್ಕರ ಜೊತೆಗಿದ್ರು.