ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ಹಾಗೂ ಜೈಡಿಎಸ್ ಮೈತ್ರಿ ಸರ್ಕಾರ ಬೀಳಿಸಲು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಕಾರಣವೆಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸುತ್ತಾ ಬರುತ್ತಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿಯೇ ಮೈತ್ರಿ ಸರ್ಕಾರ ಬೀಳಿಸಲು ಕಾರಣ ಎಂದಿದ್ದಾರೆ.
ಯಡಿಯೂರಪ್ಪ ಕೊನೆಯವರೆಗೂ ಕಾವೇರಿ ನಿವಾಸದಲ್ಲಿ ಇದ್ದರಲ್ಲಾ. ಇದಕ್ಕೆ ಕುಮಾರಸ್ವಾಮಿ ಏನು ಹೇಳುತ್ತಾರೆ. ಮೈತ್ರಿ ಸರ್ಕಾರ ಬೀಳಿಸಲು ಕಾವೇರಿ ನಿವಾಸದಲ್ಲೇ ಸ್ಕೆಚ್ ಹಾಕಿದ್ದು ಎಂದು ವಾಪಸ್ ಕುಮಾರಸ್ವಾಮಿಗೆ ಹೇಳುವ ಮೂಲಕ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ.