ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಮೂಲಕ ತಿದ್ದಪಡಿ ಮಸೂದೆಯಾದ ಕೋಡ್ ಆಫ್ ಕ್ರಿಮಿನಲ್ ಫ್ರೊಸಿಜರ್-2021ಕ್ಕೆ ಅಂಕಿತ ಹಾಕಿದ್ದಾರೆ.
ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೆ ವಿದ್ಯುನ್ಮಾನ ಆಡಿಯೋ, ವಿಡಿಯೋ ಮೂಲಕ ಸಾಕ್ಷಿಗಳ ಹೇಳಿಕೆ ಪಡೆಯಬಹುದು. ಈ ವೇಳೆ ಆರೋಪಿ ಪರ ವಕೀಲರು ಹಾಜರಿದ್ದರೆ ಆಯಿತು. ಆರೋಪಿ ಗೈರಿನಲ್ಲಿ ವಿಚಾರಣೆ ನಡೆಸಿ ಶಿಕ್ಷೆಯನ್ನು ಸಹ ಪ್ರಕಟಿಸಬಹುದು.