ಮಲೆನಾಡಾದ ಬಿಸಿಲೂರು

483

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ಮೋಡ ಮುಸುಕಿದ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗೆ 11 ಗಂಟೆಯಾದರೂ ಹೊಗೆಮಂಜು ಎಲ್ಲೆಡೆ ಆವರಿಸಿಕೊಂಡಿರುತ್ತೆ. ಮೈನಡಗುವ ಚಳಿಯಿಂದಾಗಿ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ.

ಸದಾ ತಣ್ಣನೆಯ ಗಾಳಿ ಬೀಸುತ್ತಲೇ ಇರುತ್ತೆ. ಆಗೊಮ್ಮೆ ಈಗೊಮ್ಮೆ ಸೂರ್ಯನ ದರ್ಶನವಾಗುತ್ತೆ. ಆದರೂ, ಚಳಿ ಮಾತ್ರ ಕಡಿಮೆಯಾಗಿರುವುದಿಲ್ಲ. ಹೀಗೆ ಸದಾ ಹೊಗೆಮಂಜು ಆವರಿಸಿಕೊಳ್ಳುವುದರಿಂದ ಬೆಳೆಗಳಿಗೆ ಕೀಟಬಾಧೆ ಶುರುವಾಗಲಿದೆ. ಇದರಿಂದಾಗಿ ರೈತರಿಗೆ ಸಂಕಷ್ಟ ಎದುರಾಗಿದೆ.




Leave a Reply

Your email address will not be published. Required fields are marked *

error: Content is protected !!