ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜುವೊಂದರಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಇದಾದ ಬಳಿಕ ಓರ್ವ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ರೇವಾ ಕಾಲೇಜು ಫೆಸ್ಟ್ ವೇಳೆ ಗಲಾಟೆ ನಡೆದಿದ್ದು, ಇಂತಹದೊಂದು ಅನಾಹುತ ಸಂಭವಿಸಿದೆ. ಮೆಕ್ಯಾನಿಕಲ್ ಇಂಜಿನಿಯರಂಗ್ ವಿದ್ಯಾರ್ಥಿ ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ(22) ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.