ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟರಾಗಿದ್ದ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ನಡೆಸಿರುವ ಘಟನೆ ಹೆಬ್ಬಾಳ ಫ್ಲೈಓವರ್ ಹತ್ತಿರ ಮಂಗಳವಾರ ರಾತ್ರಿ ನಡೆದಿದೆ.
ಜಿಮ್ ಮುಗಿಸಿಕೊಂಡು ರಾತ್ರಿ 9 ಗಂಟೆಯ ಸುಮಾರಿಗೆ ಮನೆಗೆ ಹೋಗುತ್ತಿದ್ದ ವೇಳೆ ಮಂಗಳಮುಖಿಯರ ತಂಡ ರಕ್ಷಕ್ ಬ್ಯಾಗ್ ಹಿಡಿದು ಎಳೆದಿದೆ. ಆಗ ಅವನು ಗಾಡಿಯಿಂದ ಕೆಳಗೆ ಬಿದ್ದಿದ್ದಾನೆ. ಇದ್ರಿಂದಾಗಿ ಸಣ್ಣಪುಟ್ಟ ಗಾಯಗಳಾಗಿವೆ. ಅಲ್ದೇ, ಅವರಿಂದ ತಪ್ಪಿಸಿಕೊಂಡು ಬೈಕ್ ಸಹ ಅಲ್ಲಿಯೇ ಬಿಟ್ಟು ಹೋಗಿದ್ದಾನೆ.
ನಂತರ ಪೊಲೀಸರೊಂದಿಗೆ ಬಂದು ಬೈಕ್ ತೆಗೆದುಕೊಂಡು ಹೋಗಿದ್ದಾನೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.