ನಟ ರಾಜು ತಾಳಿಕೋಟೆ ಮೇಲೆ ಹಲ್ಲೆ: ಪ್ರತಿಭಟನೆ

382

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಹ್ಯಾಸ ನಟ ಹಾಗೂ ಟಿಪ್ಪು ಕ್ರಾಂತಿ ಸೇನೆ ಕರ್ನಾಟಕದ ರಾಜ್ಯಾಧ್ಯಕ್ಷ ರಾಜು ತಾಳಿಕೋಟೆ ಮೇಲಿನ ಹಲ್ಲೆ ಖಂಡಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಟಿಪ್ಪು ಕ್ರಾಂತಿ ಸೇನೆ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಸ್ತಗೀರ ಮುಲ್ಲಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವೈ.ಸಿ ಮಯೂರ, ಕೋಲಿ ಕಬ್ಬಲಿಗ ಯುವ ವೇದಿಕೆ ರಾಜ್ಯಾಧ್ಯಕ್ಷ ಶಿವಾಜಿ ಮೇಟಗಾರ ಸೇರಿದಂತೆ ಇತರೆ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪ್ರಮುಖರು, ವಿಜಯಪುರ ಜಿಲ್ಲೆಯ ಅತ್ಯುತ್ತಮ ಹಾಸ್ಯ ನಟ, ರಂಗಭೂಮಿ ಕಲಾವಿದ ಹಾಗೂ ಸಾಮಾಜಿಕ ಹೋರಾಟಗಾರ ರಾಜು ತಾಳಿಕೋಟೆ ಮೇಲೆ ಆಗಿರುವ ಹಲ್ಲೆಯನ್ನು ಖಂಡಿಸುತ್ತೇವೆ. ಕೌಟುಂಬಿಕ ಕಲಹದ ನೆಪದಲ್ಲಿ ಕಾಣದ ಕೈಗಳು ಅವರ ವಿರುದ್ಧ ಕೆಲಸ ಮಾಡುತ್ತಿವೆ. ಖ್ಯಾತ ನಟನಿಗೆ ಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದು ಅಪರಾಧವಾಗಿದೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಉಪ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಟಿಕೆಎಸ್ ಉತ್ತರ ಕರ್ನಾಟಕ ಅಧ್ಯಕ್ಷ ರಜಾಕ ನಾಟೀಕಾರ, ಜಗದೀಶ ಕಲಬುರ್ಗಿ, ರಾಜು ಗುಬ್ಬೇವಾಡ, ಸುಬಿನ ಬಾಗವಾನ, ಖಾಝಿರ ಮುಲ್ಲಾ, ಇರ್ಮಾನ ಬಾಗವಾನ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!