ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ ಅವರು ಅಧಿಕೃತವಾಗಿ ಆಪ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಅವರ ನೇತೃತ್ವದಲ್ಲಿ ಟೆನ್ನಿಸ್ ಕೃಷ್ಣ ಅವರು ಆಪ್ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಇತ್ತೀಚಗಷ್ಟೇ ಕಾಂಗ್ರೆಸ್ ತೊರೆದು ಆಪ್ ಪಕ್ಷವನ್ನು ಮಾಜಿ ಶಾಸಕ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಸೇರ್ಪಡೆಯಾಗಿದ್ದಾರೆ. ಇದೀಗ ಟೆನ್ನಿಸ್ ಕೃಷ್ಣ ಅವರು ಆಪ್ ನೊಂದಿಗೆ ಕೈಜೋಡಿಸಿದ್ದಾರೆ.