ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಬರುತ್ತೆ ಎಂದು ನಾನು ಊಹಿಸಿರಲಿಲ್ಲ. ಶಾಲಾ ಮಕ್ಕಳಲ್ಲಿ ವಿಷಬೀಜ ಬಿತ್ತಲು ಹೊರಟಿದ್ದಾರೆ. ಮುಸ್ಲೀಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಿದ್ದಾರೆ. ರಾಜ್ಯವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಇಂತಹದೊಂದು ಸರ್ಕಾರ ಬರಲು ಸಿದ್ದರಾಮಯ್ಯ ಕಾರಣ. ಮೈತ್ರಿಯನ್ನು ಹಾಳು ಮಾಡಿದರು. ಸಿದ್ದರಾಮಯ್ಯನವರನ್ನು ನಂಬಿ ಮುಸ್ಲೀಂರು ಬೀದಿಗೆ ಬಂದರು. ಈ ಬಗ್ಗೆ ಮರು ಚಿಂತನೆ ನಡೆಸಬೇಕಿದೆ ಎಂದರು.