ಪ್ರಜಾಸ್ತ್ರ ಸುದ್ದಿ
ಯಾದಗಿರಿ: ಕೋಮು ಪ್ರಚೋದನಕಾರಿ ಭಾಷಣ ಪ್ರಕರಣ ಸಂಬಂಧ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗಸ್ವಾಮಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರೊಬೇಷನರಿ ಅಧಿಕಾರಿಗಳಿಗೆ ವರದಿ ನೀಡುವಂತೆ ತಿಳಿಸಿದ್ದು, ನಂತರ ಶಿಕ್ಷೆ ಪ್ರಕಟಿಸಲಿದೆ.
ಒಂದು ಕೋಮಿನ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡುವುದರ ಜೊತೆಗೆ ಪ್ರಚೋದನೆ ನೀಡಿದ ಸಂಬಂಧ 2015ರಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಇಂದು ಯಾದಗಿರಿ ಸೆಷನ್ಸ್ ಕೋರ್ಟ್ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.