ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಬ್ರಾಹ್ಮಣ ಸಮುದಾಯದ ವಿರುದ್ಧ ನಟ ಚೇತನ ಅವಹೇಳನಕಾರಿಯಾಗಿ ಮಾತ್ನಾಡಿದ್ದಾರೆ ಎಂದು ಹೇಳಿ, ಅವರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ. ಬ್ರಾಹ್ಮಣ ಸಮುದಾಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಅವರು ದೂರು ಸಲ್ಲಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಮಾತ್ನಾಡಿರುವ ನಟ ಚೇತನ, ಬ್ರಾಹ್ಮಣಿಕೆ ಭಯೋತ್ಪಾದನೆ ಅನ್ನೋ ರೀತಿಯಲ್ಲಿ ಮಾತ್ನಾಡಿದ್ದಾರೆ. ಇದ್ರಿಂದಾಗಿ ಸಮುದಾಯಕ್ಕೆ ನೋವಾಗಿದೆ. ಅವರು ಬಹಿರಂಗ ಕ್ಷಮೆಯಾಚಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರು ನೀಡಲಾಗಿದೆ.