ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಉದ್ದೇಶಪೂರ್ವಕವಾಗಿ ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡುತ್ತಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವುದು, ಸಾಮಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿ ದೂರು ದಾಖಲಿಸಲಾಗಿದೆ.