ಬ್ರಾಹ್ಮಣರ ಅವಹೇಳನ: ಮೋಹನ್ ಭಾಗವತ್ ವಿರುದ್ಧ ದೂರು

270

ಪ್ರಜಾಸ್ತ್ರ ಸುದ್ದಿ

ಬಿಹಾರ: ಜಾತಿ ವ್ಯವಸ್ಥೆ ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ ಎಂದು ಆರ್ ಎಸ್ಎಸ್ ಮುಖ್ಯಸ್ಥೆ ಮೋಹನ್ ಭಾಗವತ್, ಮುಂಬೈನಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಹೇಳಿದ್ದರು. ಈ ಸಂಬಂಧ ಬಿಹಾರ ಕೋರ್ಟಿನಲ್ಲಿ ಮಂಗಳವಾರ ದೂರು ದಾಖಲಾಗಿದೆ. ವಕೀಲ ಸುಧೀರ್ ಕುಮಾರ್ ಓಜಾ ಎಂಬುವರು ದೂರು ಸಲ್ಲಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ನೋವು ಉಂಟಾಗುವುದು ಹಾಗೂ ಸಾರ್ವಜನಿಕ ಶಾಂತಿ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಮುಜಾಫರ್ಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಫೆಬ್ರವರಿ 20ರಂದು ಅರ್ಜಿಯ ವಿಚಾರಣೆ ನಡೆಸಲಿದೆ.




Leave a Reply

Your email address will not be published. Required fields are marked *

error: Content is protected !!