ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಚಂದ್ರಯಾನ-3 ವಿಚಾರವನ್ನಿಟ್ಟುಕೊಂಡು ಮಾಡಿದ್ದ ವಿಡಂಬನಾತ್ಮಕ ಟೀಟ್ ನಿಂದಾಗಿ ನಟ ಪ್ರಕಾಶ್ ರಾಜ್ ಗೆ ಸಂಕಷ್ಟ ಎದುರಾಗಿದೆ. ರಾಜಕೀಯವಾಗಿ ಯಾರನ್ನೋ ಟೀಕಿಸುವ ಭರದಲ್ಲಿ ಮಾಡಿದ ಟ್ವೀಟ್ ವಿರುದ್ಧ ಇದೀಗ ದೂರು ದಾಖಲಾಗಿದೆ.
ಬಾಗಲಕೋಟೆ ಜಿಲ್ಲೆ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡರು ದೂರು ದಾಖಲಿಸಿದ್ದಾರೆ. ಇಡೀ ದೇಶವೇ ಹೆಮ್ಮೆ ಪಡುವ ಸಂದರ್ಭದಲ್ಲಿ ನಟ ಪ್ರಕಾಶ್ ರಾಜ್ ವ್ಯಂಗ್ಯ ಮಾಡಿದ್ದಾರೆ. ಇವರ ವಿರುದ್ಧ ಕಠಿಣ ಕಾನೂನ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ದೂರು ಸಲ್ಲಿಸಲಾಗಿದೆ.
ತಮ್ಮ ಟ್ವೀಟ್ ಗೆ ವ್ಯಕ್ತವಾದ ಆಕ್ರೋಶದ ಬಗ್ಗೆ ಮತ್ತೊಂದು ಪೋಸ್ಟ್ ಮೂಲಕ ಸಮಜಾಯಿಷಿ ನೀಡಲು ನೋಡಿದ್ದು, ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ.