ರೈತ ನಾಯಕ ಟಿಕಾಯತ್ ವಿರುದ್ಧ ಶಿವಮೊಗ್ಗದಲ್ಲಿ ದೂರು

338

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಕರ್ನಾಟಕ ಪ್ರವಾಸ ಮಾಡಿ ಕೃಷಿ ಕಾಯ್ದೆ ಹೋರಾಟದ ಬಗ್ಗೆ ಮಾತ್ನಾಡಿದ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ ಟಿಕಾಯತ್ ವಿರುದ್ಧ ದೂರು ದಾಖಲಾಗಿದೆ. ಮಾರ್ಚ್ 20ರಂದು ಇಲ್ಲಿನ ಸೈನ್ಸ್ ಮೈದಾನದಲ್ಲಿ ರೈತರ ಮಹಾ ಪಂಚಾಯತನಲ್ಲಿ ಪ್ರಚೋದನಕಾರಿಯಾಗಿ ಮಾತ್ನಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.

ಟ್ರ್ಯಾಕ್ಟರ್ ಗಳನ್ನು ಹೋರಾಟಕ್ಕೆ ಅಸ್ತ್ರವಾಗಿ ಬಳಸಿಕೊಳ್ಳಬೇಕು. ಬೆಂಗಳೂರಿಗೆ ದಿಗ್ಬಂಧನ ಹಾಕಬೇಕು ಎಂದು ಹೇಳಿರುವುದನ್ನು ಆಧರಿಸಿ ಪೊಲೀಸರೆ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಐಪಿಸಿ ಕಲಂ 153ರ ಅಡಿಯಲ್ಲಿ ಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ರೈತ ಸಂಘ, ಹಸಿರು ಸೇನೆ, ಐಕ್ಯ ಹೋರಾಟ ಸಮಿತಿ ಅವರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಕೇಶ ಟಿಕಾಯತ್ ಮಾತ್ನಾಡಿದ್ದರು.




Leave a Reply

Your email address will not be published. Required fields are marked *

error: Content is protected !!