ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎನ್ನುವ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಈ ಬಗ್ಗೆ ಮಾತನಾಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ದೇಶದ್ರೋಹಿಗಳಿಗೆ ಬೆಂಬಲ ನೀಡುವ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದಿದ್ದಾರೆ.
ಸದನದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು. ಬಜೆಟ್ ಮೇಲೆ ನಡೆದ ಚರ್ಚೆಗೆ ಸಿಎಂ ಉತ್ತರ ನೀಡಲು ಶುರು ಮಾಡಿದರೂ ಶಾಸಕರು ಧರಣಿ ಮುಂದುವರೆಸಿದರು. ಕಾಗದ ಪತ್ರಗಳನ್ನು ಹರಿದು ಘೋಷಣೆ ಕೂಗಿದರು. ಸಿಎಂ ತಮ್ಮ ಭಾಷಣ ಮುಂದುವರೆಸಿದರು.
ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿ 68 ಗಂಟೆ ಕಳೆದರೂ ಒಬ್ಬ ಆರೋಪಿಯನ್ನು ಬಂಧಿಸಿಲ್ಲ. ಹಿಂದೂ ವಿರೋಧಿ ಸರ್ಕಾರ ದೇಶ ದ್ರೋಹಿಗಳಿಗೆ ಬೆಂಬಲ ಕೊಡುತ್ತಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಬೇಕು ಎಂದು ಆರ್.ಅಶೋಕ್ ಆಗ್ರಹಿಸಿದರು. ನಂತರ ಶಾಸಕರೊಂದಿಗೆ ಸಭಾತ್ಯಾಗ ಮಾಡಿದರು.