‘ಕೇಂದ್ರದಿಂದ ರಾಷ್ಟ್ರೀಯ ಲಾಂಛನವೇ ಬದಲು’

385

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸೋಮವಾರ ಪ್ರಧಾನಿ ಮೋದಿ ನೂತನ್ ಸಂಸತ್ ಭವನದ ಮುಂಭಾಗದಲ್ಲಿರುವ ರಾಷ್ಟ್ರೀಯ ಲಾಂಛನವನ್ನು ಉದ್ಘಾಟಿಸಿದ್ದಾರೆ. ಆದರೆ, ಇದನ್ನು ಉದ್ಘಾಟಿಸುವ ಹಕ್ಕು ಇರುವುದು ಲೋಕಸಭಾ ಸ್ಪೀಕರ್ ಗೆ. ಪ್ರಧಾನಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನಿನ್ನೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಕಾಂಗ್ರೆಸ್ ಸೇರಿದಂತೆ ಸಾರ್ವಜನಿಕರು ಸಹ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಲಾಂಛನದ ವಿನ್ಯಾಸವನ್ನೇ ಬದಲಿಸಲಾಗಿದೆ. ಈ ಮೂಲಕ ರಾಷ್ಟ್ರೀಯ ಲಾಂಛನವನ್ನೇ ಬದಲಿಸಲಾಗಿದೆ ಎಂದು ಕಿಡಿ ಕಾರುತ್ತಿದ್ದಾರೆ. ಅಶೋಕಸ್ತಂಭದ ಮೇಲಿನ ಚಿತ್ರಗಳನ್ನು, ಪರಿಸರವನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!