ಪ್ರಜಾಸ್ತ್ರ ಸುದ್ದಿ
ನವದೆಹಲಿ: ಇಲ್ಲಿನ ವಿಜ್ಞಾನ ಭವನದಲ್ಲಿ ನಡೆದ ಮುಖ್ಯಮಂತ್ರಿಗಳು ಹಾಗೂ ಹೈಕೋರ್ಟ್ ಮುಖ್ಯನಾಯಮೂರ್ತಿಗಳ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ, ಕೋರ್ಟ್ ನಲ್ಲಿ ಸ್ಥಳೀಯ ಭಾಷೆಗಳನ್ನು ಹೆಚ್ಚು ಬಳಸಬೇಕು ಎಂದು ಕರೆ ನೀಡಿದರು.
ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಹೆಚ್ಚು ಬಳಸಿದಷ್ಟು ನ್ಯಾಯಾಂಗ ವ್ಯವಸ್ಥೆ ಮೇಲೆ ಜನರಿಗೆ ವಿಶ್ವಾಸ ಬರುತ್ತೆ. ಜೊತೆಗೆ ಜನಸಾಮಾನ್ಯರಿಗೆ ಕೂಡಲೇ ತಲುಪುತ್ತೆ. ಇನ್ನು ಅಪ್ರಸ್ತುತವಾಗಿರುವ 1,450 ಕಾನೂನಗಳನ್ನು ತೆಗೆದು ಹಾಕಲಾಗಿದೆ. ರಾಜ್ಯ ಸರ್ಕಾರಗಳು 75 ಕಾನೂನುಗಳನ್ನು ತೆಗೆದು ಹಾಕಿವೆ ಎಂದರು.