ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಬಂಧ ಕಾಂಗ್ರೆಸ್ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು ಬಿಡುಗಡೆ ಮಾಡಿದ 2ನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳ ಹೆಸರಿದ್ದು, ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿರುವ ಕಡೂರು ಮಾಜಿ ಶಾಸಕ ವೈ.ಎಸ್ ವಿ ದತ್ತಾ ಅವರಿಗೆ ನಾಯಕರ ಮೋಸ ಮಾಡಿದರು ಎನ್ನಲಾಗುತ್ತಿದೆ.
2ನೇ ಪಟ್ಟಿಯಲ್ಲಿ ಕಡೂರು ಕ್ಷೇತ್ರದಿಂದ ಕೆ.ಎಸ್ ಆನಂದಗೆ ಟಿಕೆಟ್ ಘೋಷಿಸಲಾಗಿದೆ. ಹೀಗಾಗಿ ಟಿಕೆಟ್ ಬಯಸಿ ಬಂದಿದ್ದ ದತ್ತಾಗೆ ಇದೀಗ ಮೋಸವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಕಾಂಗ್ರೆಸ್ ಏನಾದರೂ 3ನೇ ಪಟ್ಟಿಯಲ್ಲಿ ಏನಾದರೂ ಹೆಸರು ಘೋಷಿಸಬಹುದಾ ಅನ್ನೋ ಕುತೂಹಲವಿದೆ.