ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬೇರೆ ಬೇರೆ ಅಂತಾ ಕಂಡ್ರೂ ಎರಡು ಒಂದೇ ಆಗಿವೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. ಚಿತ್ರದುರ್ಗ ಹಾಗೂ ದಾವಣಗೆರೆಯ 10 ಕ್ಷೇತ್ರಗಳ ಚುನಾವಣೆ ಪ್ರಚಾರ ಸಂಬಂಧ ನಗರದ ಮುರುಘರಾಜೇಂದ್ರ ಮೈದಾನದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎರಡೂ ಪಕ್ಷಗಳಿಂದ ಕರ್ನಾಟಕ ಅಭಿವೃದ್ಧಿ ಸಾಧ್ಯವಿಲ್ಲ. ನಿಮ್ಮ ಮಕ್ಕಳ ಭವಿಷ್ಯ ನೋಡಿ ಮತದಾನ ಮಾಡಿ. ಎರಡೂ ಪರಿವಾರದ ಪಕ್ಷಗಳು. ಕಾಂಗ್ರೆಸ್ ಇತಿಹಾಸ ನೋಡಿದರೆ ತುಷ್ಟೀಕರಣ ಮಾಡುವುದೆ ಆಗಿದೆ. 2014ಕ್ಕೂ ಮೊದಲು ದೇಶದಲ್ಲಿ ಎಷ್ಟು ವೈದ್ಯಕೀಯ ಕಾಲೇಜುಗಳು ಇದ್ದವೋ ಅದರ ಎರಡು ಪಟ್ಟು 9 ವರ್ಷಗಳಲ್ಲಿ ಸ್ಥಾಪನೆಯಾಗಿವೆ ಎಂದರು.
ಕಾಂಗ್ರೆಸ್ ನಾಯಕರು ಸುಳ್ಳು ಭರವಸೆಗಳನ್ನು ಕೊಡುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಯಿಂದ ಅಭಿವೃದ್ಧಿ ಸಾಧ್ಯವಿಲ್ಲ. ಯಾಕಂದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿಯ ಯೋಜನೆಗಳಿಗೆ ರಿವರ್ಸ್ ಗೇರ್ ಹಾಕಲಿದೆ ಎಂದು ವಾಗ್ದಾಳಿ ನಡೆಸುತ್ತಲೇ ಕೇಂದ್ರದ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು.