ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

287

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಬರೆಯುವ ಮೂಲಕ ಹೆಚ್ಡಿಕೆಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.

ಒಕ್ಕಲಿಗ ಸಮುದಾಯ ಡಿ.ಕೆ ಶಿವಕುಮಾರ್ ಬೆನ್ನಿಗೆ ನಿಂತಿರುವುದು ಕುಮಾರಸ್ವಾಮಿಗೆ ಸಹಿಸಲು ಆಗುತ್ತಿಲ್ಲ. ಜಾತ್ಯಾತೀತ ಸಿದ್ಧಾಂತಕ್ಕೆ ಬೆಂಕಿ ಇಟ್ಟಾದರೂ ಸರಿ, ಅಲ್ಪ ಸಂಖ್ಯಾತ ಮತದಾರರಿಗೆ ದ್ರೋಹ ಬಗೆದಾದರೂ ಸರಿ ಎಂದು ಬಿಜೆಪಿ ಜೊತೆ ಸಖ್ಯ ಬೆಳೆಸಿ ಡಿ.ಕೆ ಶಿವಕುಮಾರ್ ಅವರ ಷಡ್ಯಂತ್ರ ರೂಪಿಸಲು ತಯಾರಾಗಿದ್ದಾರೆ. ಕುಮಾರಸ್ವಾಮಿಯವರೇ, ನಿಮ್ಮ ಯಾವ ಷಡ್ಯಂತ್ರಗಳೂ ಫಲ ಕೊಡುವುದಿಲ್ಲ. ಬದಲಾಗಿ ಜೆಡಿಎಸ್ ಪಕ್ಷವನ್ನು ಬಿಜೆಪಿ ಕಾಲ ಬುಡದಲ್ಲಿ ನೈವೇದ್ಯಕ್ಕೆ ಇಟ್ಟು ನೀವು ಹಾಗೂ ನಿಮ್ಮ ಫ್ಯಾಮಿಲಿ ಬಿಜೆಪಿಯ ಜೀತ ಮಾಡಿಕೊಂಡಿರುವ ಕಾಲ ಶೀಘ್ರದಲ್ಲಿ ಬರಲಿದೆ ಎಂದು ವಾಗ್ದಾಳಿ ನಡೆಸಲಾಗಿದೆ.




Leave a Reply

Your email address will not be published. Required fields are marked *

error: Content is protected !!