ಕುಮಾರಸ್ವಾಮಿಗೆ ಮಂಥರೆ, ಶಕುನಿ ಎಂದ ಕಾಂಗ್ರೆಸ್

167

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ನಡೆಗೆ ಅಸಮಾಧಾನ ಹೊರ ಹಾಕುತ್ತಿರುವ ಸಿ.ಎಂ ಇಬ್ರಾಹಿಂರನ್ನೇ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿದೆ. ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ಮಂಥರೆ, ಶಕುನಿ ಇದ್ದಂತೆ ಎಂದಿದೆ.

ಮೊದಲ ಬಾರಿಗೆ ನಿಮ್ಮ ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. ಶಿವಕುಮಾರ್ ಈ ಅಪ್ಪ ಮಕ್ಕಳನ್ನು ನಂಬಬೇಡಿ. ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ ಎಂದು. ಆದರೆ, ಸಿದ್ಧಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜೊತೆ ನಿಂತಿತು. ಕಾಂಗ್ರೆಸ್ ದಯಾಭಿಕ್ಷೆಯಿಂದ 2ನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್ ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕೆ ನಿರೀಕ್ಷೆ ಮಾಡುವುದು ಮಹಾಪಾಪ ಎಂದಿದೆ ಅಂತಾ ಬರೆಯುವ ಮೂಲಕ ತೀವ್ರ ವಾಗ್ದಾಳಿ ನಡೆಸಲಾಗಿದೆ.




Leave a Reply

Your email address will not be published. Required fields are marked *

error: Content is protected !!