ಅಶೋಕ್ ಅವರೆ ಯಾವ ಬ್ರಾಂಡ್ ಬಕೆಟ್ ಹಿಡಿದಿರಿ?: ಕಾಂಗ್ರೆಸ್

199

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸಭಾ ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಳಿಕ ಸ್ವತಃ ಬಿಜೆಪಿಯಲ್ಲಿ ಅಸಮಾಧಾನ ಶುರುವಾದವು. ಅದು ಇನ್ನು ಮುಂದುವರೆದಿದೆ. ಚಳಗಾಲದ ಅಧಿವೇಶನದಲ್ಲಿಯೂ ಹೊರಬಿದ್ದಿದ್ದು, ಕಾಂಗ್ರೆಸ್ ಗೆ ಇದು ಅಸ್ತ್ರವಾಗಿದೆ.

ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಬಕೆಟ್ ಬಕೆಟ್ ಎಂದು ಹೇಳಿರುವುದು ತೀವ್ರ ಸದ್ದು ಮಾಡಿದೆ. ಇಂತಹ… ಮಕ್ಕಳನ್ನು ನಾಯಕರನ್ನಾಗಿ ಮಾಡಿದರೆ ಪಕ್ಷ ಮುಳುಗಿ ಹೋಗದೆ ಇನ್ನೇನು ಆಗುತ್ತದೆ. ಬಕೆಟ್ ಹಿಡಿದುಕೊಂಡು ರಾಜಕಾರಣ ಮಾಡುವವರು ಇನ್ನೇನು ಮಾಡುತ್ತಾರೆ ಎಂದು ಕೂಗಿದ್ದಾರೆ. ಹೊಂದಾಣಿಕೆ ರಾಜಕಾರಣ ಮಾಡಿಕೊಂಡೇ ಬಂದು ಅಧಿಕಾರ ಹಿಡಿದರು. ಇದಲ್ಲದೇ ಇನ್ನೇನು ಮಾಡಲು ಸಾಧ್ಯ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಮಾತೇ ಕಾಂಗ್ರೆಸ್ ಬಳಿಸಿಕೊಂಡು, ವಿರೋಧ ಪಕ್ಷದ ನಾಯಕನ ಸ್ಥಾನ ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ ಎಂದು ಆರ್.ಅಶೋಕ್ ವಿರುದ್ಧ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಕಿಡಿ ಕಾರಿದೆ.

ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರಗಳು.. ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ, ಈಗ ಹೊಸದಾಗಿ ಬಜೆಟ್ ಜನತಾ ಪಾರ್ಟಿ ಎಂದು ಬರೆಯುವ ಮೂಲಕ ಭರ್ಜರಿ ಕಾಲೆಳೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ.




Leave a Reply

Your email address will not be published. Required fields are marked *

error: Content is protected !!