ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಬಿಜೆಪಿಯ ಕೆಲ ಶಾಸಕರನ್ನು ಕಾಂಗ್ರೆಸ್ ಗೆ ಸೆಳೆಯಲು ಯತ್ನಿಸಿರುವ ಮಾಹಿತಿ ಬಂದಿದೆ. ನಮ್ಮ ಯಾವೊಬ್ಬ ಶಾಸಕನೂ ಕಾಂಗ್ರೆಸ್ ನತ್ತ ಮುಖ ಮಾಡಲ್ಲವೆಂದು ಮಾಜಿ ಸಿಎಂ ಬಿಎಸ್ವೈ ಹೇಳಿದ್ದಾರೆ.
ನಮ್ಮ ಪಕ್ಷದ ಯಾವ ಶಾಸಕರು ಪಕ್ಷ ಬಿಟ್ಟು ಹೋಗಲ್ಲ. ಕಾಂಗ್ರೆಸ್ ನವರೆ ಬಿಜೆಪಿಗೆ ಬರುತ್ತಾರೆ. ಯಾರು ಬರುತ್ತಾರೆ ಅನ್ನೋದು ಕೆಲ ದಿನಗಳಲ್ಲೇ ಗೊತ್ತಾಗಲಿದೆ. ಬಿಜೆಪಿ ಶಾಸಕರನ್ನು ಸೆಳೆಯುವ ವಿಫಲ ಪ್ರಯತ್ನವನ್ನು ಡಿಕೆಶಿ ನಡೆಸಿದ್ದಾರೆ ಎಂದರು.