ಗುರುಮಠಕಲ್ ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್ ಕಾರು ಅಪಘಾತ

163

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬೂರಾವ್ ಚಿಂಚನಸೂರ್ ಕಾರು ಅಪಘಾತವಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಪ್ರಚಾರ ಮುಗಿಸಿ ಕಲಬುರಗಿಗೆ ವಾಪಸ್ ಬರುತ್ತಿದ್ದಾಗ ಕಾರು ಅಪಘಾತವಾಗಿದೆ.

ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರ ಬಳಿ ಅಪಘಾತ ನಡೆದಿದೆ. ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಎರಡೂ ಕಾಲುಗಳು ಫ್ರಾಕ್ಚರ್ ಆಗಿದ್ದು, ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಯುನೈಟೆಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿದ್ದ ಚಾಲಕ, ಓರ್ವ ಗನ್ ಮ್ಯಾನ್ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಘಟನೆ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಈ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!