ಪ್ರಜಾಸ್ತ್ರ ಸುದ್ದಿ
ಭುವನೇಶ್ವರ: ಮತದಾನಕ್ಕೆ ಮೂರು ದಿನ ಬಾಕಿ ಇರುವಾಗ್ಲೇ ಓಡಿಶಾದ ಪಿಪಿಲಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಾವನ್ನಪ್ಪಿದ್ದಾರೆ. ಕೋವಿಡ್ 19 ಸೋಂಕಿನಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಅಜಿತ ಮಂಗರಾಜ ಸಾವನ್ನಪ್ಪಿದ್ದಾರೆ.
ಕಾಂಗ್ರೆಸ್ ನಾಯಕನ ಸಾವಿಗೆ ಸಿಎಂ ನವೀನ ಪಟ್ನಾಕ, ಕೇಂದ್ರ ಸಚಿವರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಏಪ್ರಿಲ್ 17ರಂದು ನಡೆಯಬೇಕಿದ್ದ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ.